Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:19 - ಪರಿಶುದ್ದ ಬೈಬಲ್‌

19 “ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:19
17 ತಿಳಿವುಗಳ ಹೋಲಿಕೆ  

ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”


“ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸ್ವಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.”


ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.


ನೀನು ಬಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಬುದನ್ನು ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ:


ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.


ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”


ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.


ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು