Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:6 - ಪರಿಶುದ್ದ ಬೈಬಲ್‌

6 ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ, ಆ ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಅದು ಹಿತವಾದರೂ ಸರಿಯೇ, ಅಹಿತವಾದರೂ ಸರಿಯೇ ಕೇಳುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:6
16 ತಿಳಿವುಗಳ ಹೋಲಿಕೆ  

ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.


ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.


ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.


ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.


ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’


“ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.


ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.


ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು