Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:11 - ಪರಿಶುದ್ದ ಬೈಬಲ್‌

11 ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಬಂದು ಐಗುಪ್ತದೇಶವನ್ನು ಹೊಡೆಯುವನು; ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:11
15 ತಿಳಿವುಗಳ ಹೋಲಿಕೆ  

ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು.


‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.


ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.


ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ.”


ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”


ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.


ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು