Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:13 - ಪರಿಶುದ್ದ ಬೈಬಲ್‌

13 ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಳಿಕ ಹಾಯಾಗಿ ಅಲ್ಲಿಂದ ಹೊರಟುಹೋಗುವನು. ಅವನು ಈಜಿಪ್ಟ್ ದೇಶದಲ್ಲಿರುವ ಸೂರ್ಯ ದೇವಾಲಯದ ಸ್ತಂಭಗಳನ್ನು ಒಡೆದುಹಾಕುವನು, ಅಲ್ಲಿನ ದೇವತೆಗಳ ಆಲಯಗಳನ್ನು ಸುಟ್ಟುಹಾಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಐಗುಪ್ತದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:13
13 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಆ ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.


ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.


ಆ ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು.


ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.


ಬಾಬಿಲೋನಿನ ರಾಜನು ಕುದುರೆಯ ಮೇಲೆ ಕುಳಿತುಕೊಂಡು ನಿನ್ನ ನಗರದೊಳಗೆ ಪ್ರವೇಶಮಾಡುವನು. ನಿನ್ನ ರಸ್ತೆಗಳ ಮೇಲೆ ಅವನ ಕುದುರೆಯ ಗೊರಸು ಶಬ್ದವೇರಿಸುವದು. ನಿನ್ನನ್ನು ತನ್ನ ಖಡ್ಗದಿಂದ ಸಂಹರಿಸುವನು. ನಿನ್ನ ನಗರದಲ್ಲಿನ ಉನ್ನತಸ್ತಂಭಗಳು ಕೆಡವಲ್ಪಡುವವು,


ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.


ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು