Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:4 - ಪರಿಶುದ್ದ ಬೈಬಲ್‌

4 ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ ಸಮಸ್ತ ಸೇನಾಪತಿಗಳೂ ಸಕಲಜನರೂ ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:4
10 ತಿಳಿವುಗಳ ಹೋಲಿಕೆ  

ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ನಾನು ಹೇಳುವುದೇನೆಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತುಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ.


ಇದಾದ ನಂತರ, ಕನಿಷ್ಠರಾದವರೂ ಮತ್ತು ಅತಿ ಮುಖ್ಯರೂ ಆದ ಜನರೆಲ್ಲರು ಮತ್ತು ಸೇನೆಯ ನಾಯಕರು ಬಾಬಿಲೋನಿನವರಿಗೆ ಹೆದರಿಕೊಂಡು ಈಜಿಪ್ಟಿಗೆ ಓಡಿಹೋದರು.


ಇಷ್ಮಾಯೇಲನು ಗೆದಲ್ಯನನ್ನು ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು.


ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಧಿಪತಿಗಳನ್ನೂ ಕರೆದನು. ಪ್ರಮುಖರು, ಅಪ್ರಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು.


ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು