5 ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.
5 ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
5 ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,
5 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ ಜನಶೇಷದವರು, ಪ್ರವಾದಿಯಾದ ಯೆರೆಮೀಯನು,
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.
ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.
ನಾನು ಸ್ವತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”
ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.
ಯೋಹಾನಾನನೂ ಉಳಿದ ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು. ಆದರೆ ಇಷ್ಮಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ದೀಯರಿಗೆ ಕೋಪ ಬರಬಹುದೆಂದು ಯೋಹಾನಾನನು ಭಯಪಟ್ಟನು. ಆದ್ದರಿಂದ ಈಜಿಪ್ಟಿಗೆ ಓಡಿಹೋಗಬೇಕೆಂದು ಅವರು ನಿರ್ಧರಿಸಿದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಹಾಮು ಬೆತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ.