Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:9 - ಪರಿಶುದ್ದ ಬೈಬಲ್‌

9 “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀನು ದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಮುಂದೆ, ಯೆಹೂದ್ಯರ ಕಣ್ಣೆದುರಿಗೆ, ನೆಲಗಟ್ಟಿನ ಕೆಳಗೆ ಇಟ್ಟು, ಗಾರೆಯಿಂದ ಮುಚ್ಚಿಬಿಟ್ಟು, ಆ ಜನರಿಗೆ ಹೀಗೆಂದು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿಬಿಟ್ಟು ಅವರಿಗೆ ಹೀಗೆ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದ್ಯರ ಮುಂದೆ ಬಚ್ಚಿಟ್ಟು, ಅವರಿಗೆ ಹೇಳತಕ್ಕದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:9
18 ತಿಳಿವುಗಳ ಹೋಲಿಕೆ  

ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.


ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೊ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೊ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೊ.


ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.


“ನರಪುತ್ರನೇ, ಒಂದು ಇಟ್ಟಿಗೆಯನ್ನು ತೆಗೆದುಕೊ, ಅದನ್ನು ನಿನ್ನ ಮುಂದೆ ಇಟ್ಟು ಅದರ ಮೇಲೆ ಒಂದು ಚಿತ್ರವನ್ನು ಅಂದರೆ ಜೆರುಸಲೇಮ್ ನಗರದ ಚಿತ್ರವನ್ನು ಕೊರೆ.


ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.


ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.


ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:


ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.


ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”


ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು