Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:10 - ಪರಿಶುದ್ದ ಬೈಬಲ್‌

10 ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:10
38 ತಿಳಿವುಗಳ ಹೋಲಿಕೆ  

ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.


ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


ಆಗ ಹಿಜ್ಕೀಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದ್ದರಿಂದ ಹಿಜ್ಕೀಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ.


“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಆದರೆ ನೀನಾಗಲಿ ನಿನ್ನ ಅಧಿಕಾರಿಗಳಾಗಲಿ ಇನ್ನೂ ದೇವರಿಗೆ ಭಯಪಡುವುದಿಲ್ಲ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದನು.


ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.


ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ನೀನು ಅವರಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿಮಗೆ ನನ್ನ ಧರ್ಮೋಪದೇಶಗಳನ್ನು ಕೊಟ್ಟಿದ್ದೇನೆ. ನೀವು ಅವುಗಳನ್ನು ಪಾಲಿಸಬೇಕು; ಅನುಸರಿಸಬೇಕು.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”


ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು