ಯೆರೆಮೀಯ 44:17 - ಪರಿಶುದ್ದ ಬೈಬಲ್17 ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. ಅಧ್ಯಾಯವನ್ನು ನೋಡಿ |
ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’
ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.