Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:2 - ಪರಿಶುದ್ದ ಬೈಬಲ್‌

2 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನಾನು ಜೆರುಸಲೇಮಿಗು ಹಾಗುಜುದೇಯದ ಎಲ್ಲ ಊರುಗಳಿಗು ಬರಮಾಡಿದ ಕೇಡನ್ನು ನೀವೇ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ಯೆರೂಸಲೇವಿುಗೂ ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:2
25 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ.


“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.


ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”


ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.


ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು.


ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡಿಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


“ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.


‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ.


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು