23 ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”
23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.
23 ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”
23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪಮಾಡಿ [ಅನ್ಯದೇವತೆಗಳಿಗೆ] ಧೂಪ ಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ.
23 ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.
‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”
ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು.
ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”
ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.
“ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.
ಆಮೇಲೆ ನಾವು ಸ್ವರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಬಲಿಯಾದರು.”
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.
ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.
ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.
ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.