Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:1 - ಪರಿಶುದ್ದ ಬೈಬಲ್‌

1 ಈ ಸಂದೇಶಗಳು ಪ್ರವಾದಿಯಾದ ಯೆರೆಮೀಯನಿಗೆ ಬಂದವು. ಈ ಸಂದೇಶಗಳು ವಿವಿಧ ಜನಾಂಗಗಳ ಬಗ್ಗೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಷ್ಟ್ರಗಳ ವಿಷಯವಾಗಿ ಸರ್ವೇಶ್ವರ ಸ್ವಾಮಿ ಪ್ರವಾದಿ ಯೆರೆಮೀಯನಿಗೆ ಅನುಗ್ರಹಿಸಿದ ವಾಣಿ ಇದು: ಈಜಿಪ್ಟನ್ನು ಕುರಿತ ವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:1
13 ತಿಳಿವುಗಳ ಹೋಲಿಕೆ  

ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.


ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.


ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.


ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ತಿರುಗಿ ಯೆಹೋವನ ಸಂದೇಶ ನನಗೆ ಬಂತು, ಆತನು ಹೇಳಿದ್ದೇನೆಂದರೆ:


ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಸೆರೆಹಿಡಿದ ಹನ್ನೆರಡನೇ ವರ್ಷದ, ಹನ್ನೆರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು