Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:10 - ಪರಿಶುದ್ದ ಬೈಬಲ್‌

10 “ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:10
25 ತಿಳಿವುಗಳ ಹೋಲಿಕೆ  

ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ತಲೆಯನ್ನು ಕತ್ತರಿಸುವುದು.’”


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:


“ವೇಗಶಾಲಿಗಳೂ ಓಡಿಹೋಗಲಾರರು. ಶೂರಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.


ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.


ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.


ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.


“ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.


ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.


ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”


ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು