Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:18 - ಪರಿಶುದ್ದ ಬೈಬಲ್‌

18 ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:18
20 ತಿಳಿವುಗಳ ಹೋಲಿಕೆ  

ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.


ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.


ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


“ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.


“‘ದೇವರು ನಮ್ಮನ್ನು ರಕ್ಷಿಸುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ ಎಂದು ನನ್ನ ಜನರು ಹೇಳುವರು.”


ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಭೂಮಿಯ ಮೇಲೂ ಆಣೆ ಇಡಬೇಡಿ. ಏಕೆಂದರೆ ಭೂಮಿಯು ದೇವರ ಪಾದಪೀಠ. ಜೆರುಸಲೇಮಿನ ಮೇಲೂ ಆಣೆ ಇಡಬೇಡಿ, ಏಕೆಂದರೆ ಅದು ಆ ಮಹಾರಾಜನ ಪಟ್ಟಣ.


ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.


ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಕೆದೆಷಿನ ಅರಸ ಕರ್ಮೆಲ್‌ ಬೆಟ್ಟದ ಯೊಕ್ನೆಯಾಮದ ಅರಸ


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು