Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:20 - ಪರಿಶುದ್ದ ಬೈಬಲ್‌

20 “ಈಜಿಪ್ಟು ಸುಂದರವಾದ ಹಸುವಿನಂತಿದೆ, ಆದರೆ ಉತ್ತರದಿಂದ ತೊಣಚಿಯು ಅದನ್ನು ಪೀಡಿಸಲು ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈಜಿಪ್ಟ್ ಅಂದವಾದ ಒಂದು ಕಡಸು ಅದಕ್ಕೆ ಹತ್ತಿಬಿಟ್ಟಿದೆ ಬಡಗಲಿಂದ ಬಂದ ಉಣ್ಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯು ಬಡಗಲಿಂದ ಅದರ ಮೇಲೆ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:20
8 ತಿಳಿವುಗಳ ಹೋಲಿಕೆ  

“ಎಫ್ರಾಯೀಮ್ ಹತೋಟಿಗೆ ಬಂದು ಕಣ ತುಳಿಯಲು ಇಷ್ಟಪಡುವ ಪ್ರಾಯದ ಹಸುವಿನಂತಿದೆ. ಆಕೆಯ ಕುತ್ತಿಗೆಗೆ ನಾನು ಒಂದು ಒಳ್ಳೆಯ ನೊಗವನ್ನಿಡುವೆನು. ಎಫ್ರಾಯೀಮನಿಗೆ ನಾನು ಹಗ್ಗದಿಂದ ಬಂಧಿಸುವೆನು. ಆಗ ಯೆಹೂದವು ಭೂಮಿಯನ್ನು ಉಳುವದು. ಯಾಕೋಬನು ಮಣ್ಣಿನ ಗೆಡ್ಡೆಗಳನ್ನು ಒಡೆದು ಪುಡಿಮಾಡುವನು.”


ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.


“ವೇಗಶಾಲಿಗಳೂ ಓಡಿಹೋಗಲಾರರು. ಶೂರಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.


ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.


“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.


ಈಜಿಪ್ಟಿಗೆ ಅವಮಾನವಾಗುವುದು. ಉತ್ತರದ ಶತ್ರು ಅವಳನ್ನು ಸೋಲಿಸುವುದು.”


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು