Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:27 - ಪರಿಶುದ್ದ ಬೈಬಲ್‌

27 “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನನ್ನ ದಾಸ ಯಕೋಬೇ, ಭಯಪಡಬೇಡ ಇಸ್ರಯೇಲೇ, ಅಂಜಬೇಡ, ಇಗೋ, ನಾನು ನಿನ್ನನ್ನು ಉದ್ಧರಿಸುವೆನು ದೂರದೇಶದಿಂದ ನಿನ್ನ ಸಂತಾನವನ್ನು ರಕ್ಷಿಸುವೆನು ಸೆರೆಹೋದ ಸೀಮೆಯಿಂದ. ಯಕೋಬು ಹಾಯಾಗಿ ಹಿಂತಿರುಗಿ ಬಾಳುವುದು ನೆಮ್ಮದಿಯಿಂದ. ಭಯಪಡಬೇಡ ನನ್ನ ದಾಸ ಯಕೋಬೇ, ನಾನಿದ್ದೇನೆ ನಿನ್ನೊಂದಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು; ಯಾರೂ ಅದನ್ನು ಹೆದರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೂ, ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶದಿಂದಲೂ ರಕ್ಷಿಸುವೆನು; ಅವನನ್ನು ಭಯಪಡಿಸುವುದಕ್ಕೆ ಯಾರು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:27
24 ತಿಳಿವುಗಳ ಹೋಲಿಕೆ  

“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.


‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.


ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.


“ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವುದನ್ನು ಕೇಳು.


“ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.


ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು