Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:7 - ಪರಿಶುದ್ದ ಬೈಬಲ್‌

7 ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಬೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಧಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಖಡ್ಗವು ವಿಶ್ರಾಂತಿಗೊಳ್ಳುವದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೇ ಅದನ್ನು ನೇವಿುಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:7
15 ತಿಳಿವುಗಳ ಹೋಲಿಕೆ  

ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು.


“ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.


“ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು. ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.


ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.


ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.


“‘ಬಾಬಿಲೋನೇ, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯತೀರಿಸುವೆನು.


“ನರಪುತ್ರನೇ, ನನ್ನ ಪರವಾಗಿ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ನೋಡು, ಒಂದು ಖಡ್ಗ, ಹರಿತವಾದ ಖಡ್ಗ, ಆ ಖಡ್ಗವು ಉಜ್ಜಿ ಶುಭ್ರಮಾಡಲ್ಪಟ್ಟಿದೆ.


ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು