Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:11 - ಪರಿಶುದ್ದ ಬೈಬಲ್‌

11 “ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯಲಾಗುವುದಿಲ್ಲ; ಸೆರೆಗೆ ಹೋಗಲಿಲ್ಲ; ಆದ್ದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:11
16 ತಿಳಿವುಗಳ ಹೋಲಿಕೆ  

“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.


“ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಬ ಸೊಕ್ಕು ಬಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಬಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.”


ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರವೇರುವದು.


ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.


ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.


ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು. ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


“ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.


ಯೆಹೋವನು ಹೀಗೆಂದನು: “ನಿನ್ನನ್ನು ನಿನ್ನ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನ್ನು ಬರಿದಾಗಿಸುವರು. ಅನಂತರ ಆ ಪಾತ್ರೆಗಳನ್ನು ಒಡೆದು ಚೂರುಚೂರು ಮಾಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು