Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:2 - ಪರಿಶುದ್ದ ಬೈಬಲ್‌

2 ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ - ಮೋವಾಬು ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:2
20 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತುಹೋಗುವುದು.”


ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”


ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಮತ್ತು ಸಿಬ್ಮಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ಮೆಯೋನ್‌ಗಳ ಹೆಸರುಗಳನ್ನು ಬದಲಾಯಿಸಿದರು.


“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.


“ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.


ಮೋವಾಬ್ ಜನಾಂಗವನ್ನು ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಬಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.”


ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”


ನಾನು ಯೆಹೋವನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಂಡೆನು. ನಾನು ಆ ಜನಾಂಗಗಳ ಬಳಿಗೆ ಹೋದೆನು ಮತ್ತು ಆ ಜನರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು