Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:38 - ಪರಿಶುದ್ದ ಬೈಬಲ್‌

38 ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:38
13 ತಿಳಿವುಗಳ ಹೋಲಿಕೆ  

ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?


ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುತ್ತಾನೆ. ಮಣ್ಣಿನ ಕುಡಿಕೆಗಳೋ ಎಂಬಂತೆ ಅವರನ್ನು ಚೂರುಚೂರು ಮಾಡುತ್ತಾನೆ.’


“ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.


ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”


ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ.


ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.


ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.


“ಯೆರೆಮೀಯನೇ, ನೀನು ಜನರಿಗೆ ಆ ವಿಷಯಗಳನ್ನು ಹೇಳು. ಅವರು ಗಮನವಿಟ್ಟು ಕೇಳುತ್ತಿರುವಾಗ ಆ ಮಣ್ಣಿನ ಕೊಡವನ್ನು ಒಡೆದುಹಾಕಿ


ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು