Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:42 - ಪರಿಶುದ್ದ ಬೈಬಲ್‌

42 ಮೋವಾಬ್ ಜನಾಂಗವನ್ನು ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಬಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:42
14 ತಿಳಿವುಗಳ ಹೋಲಿಕೆ  

ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.


ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.


ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.


ಆ ಮೃಗವು ದೇವರಿಗೆ ಅಪಮಾನ ಮಾಡಲು ತನ್ನ ಬಾಯನ್ನು ತೆರೆಯಿತು. ಅಲ್ಲದೆ ದೇವರ ಹೆಸರಿನ ವಿರುದ್ಧವಾಗಿಯೂ ದೇವರು ವಾಸಿಸುವ ಸ್ಥಳದ ವಿರುದ್ಧವಾಗಿಯೂ ಪರಲೋಕದಲ್ಲಿ ಜೀವಿಸುವ ಜನರೆಲ್ಲರ ವಿರುದ್ಧವಾಗಿಯೂ ದೂಷಣೆ ಮಾಡಿತು.


ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು