Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:9 - ಪರಿಶುದ್ದ ಬೈಬಲ್‌

9 ಮೋವಾಬಿನ ಭೂಮಿಯ ಮೇಲೆ ಉಪ್ಪನ್ನು ಹರಡಿರಿ. ದೇಶವು ಬರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಬರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಲಿ ಅದರ ನಗರಗಳು ಹಾಳುಬಿದ್ದು ನಿರ್ಜನವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಏಕೆಂದರೆ ಅದರ ಪಟ್ಟಣಗಳು ಹಾಳಾಗುವುವು; ಅವುಗಳಲ್ಲಿ ನಿವಾಸಿಗಳಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:9
8 ತಿಳಿವುಗಳ ಹೋಲಿಕೆ  

ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”


ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು.


ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?


ಆದರೆ ಆ ಸ್ತ್ರೀಗೆ ಮಹಾಗರುಡನ ಎರಡು ರೆಕ್ಕೆಗಳನ್ನು ಕೊಡಲ್ಪಟ್ಟದ್ದರಿಂದ, ತನಗಾಗಿ ಮರುಳುಗಾಡಿನಲ್ಲಿ ಸಿದ್ಧಪಡಿಸಿದ ಸ್ಥಳಕ್ಕೆ ಹಾರಿ ಹೋಗಲು ಆಕೆಗೆ ಸಾಧ್ಯವಾಯಿತು. ಅಲ್ಲಿ ಅವಳು ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುತ್ತಾ ಸರ್ಪಕ್ಕೆ ಕಾಣದಂತೆ ಮರೆಯಾಗಿರುವಳು.


ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.


ಆಹಾ, ನನಗೆ ಪಾರಿವಾಳದಂತೆ ರೆಕ್ಕೆಗಳಿದ್ದರೆ, ನಾನು ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು