Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:14 - ಪರಿಶುದ್ದ ಬೈಬಲ್‌

14 ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ - ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:14
12 ತಿಳಿವುಗಳ ಹೋಲಿಕೆ  

ನಿಮ್ಮ ಅಧಿಕಾರಿಗಳು ಚೋವನಿಗೆ ಹೋಗಿದ್ದಾರೆ, ನಿಮ್ಮ ರಾಯಭಾರಿಗಳು ಹಾನೇಸಿಗೆ ಹೋಗಿದ್ದಾರೆ.


ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.


“ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’” ಎಂದು ಹೇಳಿದನು.


ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು