Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:28 - ಪರಿಶುದ್ದ ಬೈಬಲ್‌

28 ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. ಏಳಿರಿ, ಕೇದಾರಿಗೆ ಹೋಗಿ ಮೂಡಣ ದೇಶದವರನ್ನು ಹಾಳುಮಾಡಿರಿ ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:28
20 ತಿಳಿವುಗಳ ಹೋಲಿಕೆ  

ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ಬಯೇಲ್, ಮಿಬ್ಸಾಮ್,


ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.


ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.


ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. ಯಾರಾದರೂ ಎಂದಾದರೂ ಇಂಥ ಕೆಲಸ ಮಾಡಿರುವರೇ, ನೋಡಿರಿ.


“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”


ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.


ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.


ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ.


ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.


ಇವರು ಅಬ್ರಹಾಮನ ಸಂತತಿಯವರು. ಇಷ್ಮಾಯೇಲನ ಮೊದಲನೇ ಮಗ ನೆಬಾಯೋತನು. ಅವನ ಇತರ ಗಂಡುಮಕ್ಕಳು ಯಾರೆಂದರೆ: ಕೇದಾರ್, ಅದ್ಬೆಯೇಲ್, ಮಿಬ್ಸಾಮ್,


ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು.


ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಅರಬೀಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಈ ರಾಜರು ಮರುಭೂಮಿಯಲ್ಲಿ ವಾಸಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು