Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:29 - ಪರಿಶುದ್ದ ಬೈಬಲ್‌

29 ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು, ಅವರ ಪರದೆಗಳನ್ನೂ, ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ಸುತ್ತುಮುತ್ತಲು ದಿಗಿಲು ಎಂಬದಾಗಿ ಅವರ ಕಡೆಗೆ ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:29
21 ತಿಳಿವುಗಳ ಹೋಲಿಕೆ  

ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.


ಊರ ಹೊರಗೆ ಹೋಗಬೇಡಿರಿ. ರಸ್ತೆಗಳ ಮೇಲೆ ಹೋಗಬೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.


ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ಮನೆಗಳು ಹೆದರಿ ನಡುಗುತ್ತಿದ್ದವು.


ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು.


ನಾವು ಮಕೆದೋನಿಯಕ್ಕೆ ಬಂದಾಗ ನಮಗೆ ವಿಶ್ರಾಂತಿಯೇ ಇರಲಿಲ್ಲ. ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿದ್ದವು. ಹೊರಗೆ ಕಲಹವಿತ್ತು, ಒಳಗೆ ಭಯವಿತ್ತು.


ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.


ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.


ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.


ವಿನಾಶನದ ಮೇಲೆ ವಿನಾಶವು ಬಂದು ಇಡೀ ದೇಶವೇ ಹಾಳಾಗಿದೆ. ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.


ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.


ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.


ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.


ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.


ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.


ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.


ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.


ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.


ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು