Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:31 - ಪರಿಶುದ್ದ ಬೈಬಲ್‌

31 “ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಬಾಗಿಲೂ ಇಲ್ಲ, ಬೀಗವೂ ಇಲ್ಲ’ ಎನ್ನುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 [ಬಾಬೆಲಿನವರೇ,] ಏಳಿರಿ. ಅಗುಳಿಯೂ ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಜನಾಂಗದ ಮೇಲೆ ಬೀಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:31
17 ತಿಳಿವುಗಳ ಹೋಲಿಕೆ  

‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಬ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ.


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.


ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.


ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.


ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.


ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.


“‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”


“ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”


ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.


ಹೆಂಗಸರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು.


ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.


ಆ ಗರ್ವಿಷ್ಠರು ದುಷ್ಟರೇ ಸರಿ! ಆದರೂ ಅವರ ಐಶ್ವರ್ಯವು ಹೆಚ್ಚಾಗುತ್ತಲೇ ಇದೆ.


ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು