Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:32 - ಪರಿಶುದ್ದ ಬೈಬಲ್‌

32 “ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರ ಒಂಟೆಗಳು ಕೊಳ್ಳೆಯಾಗುವುವು. ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವುವು. ಮುಂದಲೆಗೂದಲು ಕತ್ತರಿಸಿಕೊಳ್ಳುವ ಆ ಜನರನ್ನು ಎಲ್ಲ ಕಡೆಯ ಗಾಳಿಗೂ ತೂರುವೆನು. ಎಲ್ಲ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:32
8 ತಿಳಿವುಗಳ ಹೋಲಿಕೆ  

ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”


ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.


ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


“ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು