Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:39 - ಪರಿಶುದ್ದ ಬೈಬಲ್‌

39 “ಆದರೆ ಭವಿಷ್ಯದಲ್ಲಿ ನಾನು ಏಲಾಮಿಗೆ ಒಳ್ಳೆಯದನ್ನು ಮಾಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದರೂ ಕಟ್ಟಕಡೆಯಲ್ಲಿ ಏಲಾವಿುನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:39
15 ತಿಳಿವುಗಳ ಹೋಲಿಕೆ  

“ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಬಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.


ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ಅರಸನಾದ ನಿನಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.


ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”


ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತ್ವವಿರುವುದಿಲ್ಲ.


“ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.


ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು