Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:5 - ಪರಿಶುದ್ದ ಬೈಬಲ್‌

5 ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದರಿದವರನ್ನು ಕೂಡಿಸುವದಕ್ಕೆ ಯಾರೂ ಇಲ್ಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:5
16 ತಿಳಿವುಗಳ ಹೋಲಿಕೆ  

ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.


ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.


ನಿಮ್ಮ ಪಟ್ಟಣಗಳು ನಾಶವಾಗುವವು. ಗೋಡೆಯಲ್ಲಿರುವ ಬಿರುಕುಗಳ ಮೂಲಕ ಹೆಂಗಸರು ತಪ್ಪಿಸಿಕೊಂಡು ಹೋಗಿ ಹೆಣಗಳ ರಾಶಿಯ ಮೇಲೆ ಬೀಳುವರು.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’” ಎಂದು ಹೇಳಿದನು.


“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.


ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


ಊರ ಹೊರಗೆ ಹೋಗಬೇಡಿರಿ. ರಸ್ತೆಗಳ ಮೇಲೆ ಹೋಗಬೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು