Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:11 - ಪರಿಶುದ್ದ ಬೈಬಲ್‌

11 ಇಸ್ರೇಲ್ ಜನರೂ ಯೆಹೂದದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನ್ನು ಮಾಡಿರುವರು” ಎಂದು ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:11
9 ತಿಳಿವುಗಳ ಹೋಲಿಕೆ  

ಆದರೆ ನೀವು ಗಂಡನಿಗೆ ವಂಚಿಸುವ ಜಾರಿಣಿಯಂತಾದಿರಿ. ಇಸ್ರೇಲ್ ವಂಶದವರೇ, ನೀವು ನನಗೆ ದ್ರೋಹ ಮಾಡಿದಿರಿ” ಎಂದು ಯೆಹೋವನು ನುಡಿದನು.


ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ.


ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.


ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು