Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:14 - ಪರಿಶುದ್ದ ಬೈಬಲ್‌

14 ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು : “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಂತೆನ್ನುತ್ತಾನೆ - ನೀವು ಹೀಗೆ ಅಂದುಕೊಂಡದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ತಿಂದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:14
8 ತಿಳಿವುಗಳ ಹೋಲಿಕೆ  

ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು