Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:24 - ಪರಿಶುದ್ದ ಬೈಬಲ್‌

24 ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:24
27 ತಿಳಿವುಗಳ ಹೋಲಿಕೆ  

ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.


ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.


ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.


“ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಮೋಡಗಳನ್ನು ಲೆಕ್ಕಿಸಿ ಮಳೆ ಸುರಿಸಲು ಅವುಗಳನ್ನು ಮೊಗಚಿಹಾಕಿ


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ದೇವರು ಭೂಮಿಯ ಮೇಲೆ ಮಳೆ ಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುವನು.


ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರುನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.


ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು