Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:6
38 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


“ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.


“ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.


ಮತ್ತೆಮತ್ತೆ ಒಹೊಲೀಬಳು ನನಗೆ ಅಪನಂಬಿಗಸ್ತಳಾದಳು. ಆಕೆಯು ಯುವತಿಯಾಗಿದ್ದಾಗ ಈಜಿಪ್ಟಿನಲ್ಲಿ ತಾನು ಮಾಡಿಕೊಂಡಿದ್ದ ಅನೈತಿಕ ಸಂಬಂಧಗಳನ್ನು ನೆನಪುಮಾಡಿಕೊಂಡಳು.


ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ.


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.


“ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.


ನೀನು ಕತ್ತಲೆಯನ್ನು ರಾತ್ರಿಯನ್ನಾಗಿ ಮಾಡಿದೆ. ಕಾಡುಪ್ರಾಣಿಗಳು ರಾತ್ರಿಯಲ್ಲಿ ಹೊರಬಂದು ಸುತ್ತಮುತ್ತ ಓಡಾಡುತ್ತವೆ.


ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ.


ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ.


ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.


ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.


ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ? ನಿಮ್ಮ ಗಾಯಗಳು ಆಳವಾಗಿವೆ ಮತ್ತು ಅದಕ್ಕೆ ಔಷಧಿಯಿಲ್ಲ. ಯೆಹೋವನಾದ ನಾನು ನಿಮ್ಮ ಮಹಾಪರಾಧಕ್ಕಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ಪಾಪಗಳಿಗಾಗಿ ಹೀಗೆಲ್ಲ ಮಾಡಿದೆ.


ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.


ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು