Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:12 - ಪರಿಶುದ್ದ ಬೈಬಲ್‌

12 ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:12
17 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.


ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.


ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.


ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:


ಉತ್ತರದಲ್ಲಿ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನ್ನು ಈ ಪಾತ್ರೆಯಿಂದ ಒಬ್ಬರಾದ ಮೇಲೊಬ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಬಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.


“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.


ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.


ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.


ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”


ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.


ನಾನು ಬಾಬಿಲೋನಿನ ಸುಳ್ಳುದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು. ಬಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು