Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:16 - ಪರಿಶುದ್ದ ಬೈಬಲ್‌

16 ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಬಂದುದರಿಂದ ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೀಜಬಿತ್ತುವವನನ್ನೂ ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:16
7 ತಿಳಿವುಗಳ ಹೋಲಿಕೆ  

ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.


ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.


ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಬ್ಬರಮೇಲೊಬ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು’ ಎಂದು ಅವರು ಹೇಳಿಕೊಳ್ಳುವರು.


ರೈತರೇ, ದುಃಖಿಸಿರಿ, ದ್ರಾಕ್ಷಿತೋಟ ಮಾಡಿದವರೇ, ಗಟ್ಟಿಯಾಗಿ ಬೊಬ್ಬಿಡಿರಿ. ಗೋದಿಗಾಗಿಯೂ, ಜವೆಗೋದಿಗಾಗಿಯೂ ಅಳಿರಿ. ಯಾಕೆಂದರೆ ಬೆಳೆಯು ನಾಶವಾಯಿತು.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.


ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.


ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು