Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:25 - ಪರಿಶುದ್ದ ಬೈಬಲ್‌

25 ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಬಾಬಿಲೋನಿನ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದು ಉಂಟು. ಅದಕ್ಕಾಗಿ ಸರ್ವೇಶ್ವರನಾದ ನಾನು ನನ್ನ ಆಯುಧ ಶಾಲೆಯನ್ನು ತೆರೆದಿದ್ದೇನೆ. ನನ್ನ ಕೋಪದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:25
17 ತಿಳಿವುಗಳ ಹೋಲಿಕೆ  

ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.


ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.


ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ. ಜನಾಂಗಗಳನ್ನು ಜಜ್ಜಿಹಾಕಲೂ ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ.


ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ; ಶತ್ರುಗಳು ನಿನ್ನ ಕಣ್ಣೆದುರಿನಲ್ಲೇ ನೆಲಕ್ಕುರುಳುವರು.


ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು