Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:36 - ಪರಿಶುದ್ದ ಬೈಬಲ್‌

36 ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅದು ಇರಿಯಲಿ ಕೊಚ್ಚಿಕೊಳ್ಳುವವರನ್ನು ಬಯಲಿಗೆಳೆಯಲಿ ಅವರ ಬುದ್ಧಿಹೀನತೆಯನ್ನು ಸಂಹರಿಸಲಿ ಆ ಬಾಬಿಲೋನಿನ ಶೂರರನ್ನು ಬೆಬ್ಬರಬೀಳುವಂತಾಗಿಸಲಿ ಅವರೆಲ್ಲರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬೈಲಿಗೆ ಬರುವದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:36
22 ತಿಳಿವುಗಳ ಹೋಲಿಕೆ  

ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.


ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ.


ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”


ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.


ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; ಜವುಗು ನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.


ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಹೀಗೆನ್ನುತ್ತಾನೆ:


ಯೆಹೋವನು ಹೀಗೆಂದನು: “ಬಹುಬೇಗ ಮೋವಾಬಿಗೆ ಕೋಪ ಬರುತ್ತದೆ. ಅವನು ಬಡಾಯಿ ಕೊಚ್ಚಿಕೊಳ್ಳುತ್ತಾನೆಂಬುದು ನನಗೆ ಗೊತ್ತು. ಆದರೆ ಅವನ ಬಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು.


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು