Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:42 - ಪರಿಶುದ್ದ ಬೈಬಲ್‌

42 ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:42
23 ತಿಳಿವುಗಳ ಹೋಲಿಕೆ  

ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ.


ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು.


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


“ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.


ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.


ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.


ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.


“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ತೂರೇ, ನಾನು ನಿನಗೆ ಮ್ಯುಯಿತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನ್ನು ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಬರುವರು.”


ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು