Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:7 - ಪರಿಶುದ್ದ ಬೈಬಲ್‌

7 ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:7
28 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.


ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’” ಇದು ಯೆಹೋವನ ಸಂದೇಶ.


ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.


ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು.


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಆ ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ.


ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ಯಾಕೆಂದರೆ ಆ ಜನಾಂಗಗಳು ಯಾಕೋಬ್ಯರನ್ನೂ ಅವರ ದೇಶವನ್ನೂ ನಾಶಮಾಡಿದರು.


ನನ್ನ ಒಡೆಯನೇ, ನನ್ನ ಬಾಲ್ಯದಿಂದಲೂ ನೀನೇ ನನ್ನ ನಿರೀಕ್ಷೆಯೂ ಭರವಸವೂ ಆಗಿರುವೆ.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.


ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.


“‘ಈಗ ಆ ಮಂದೆಯು ಚದರಿಹೋಗಿದೆ. ಯಾಕೆಂದರೆ ಅವುಗಳಿಗೆ ಕುರುಬರಿಲ್ಲ. ಅವುಗಳು ಕಾಡುಪ್ರಾಣಿಗಳಿಗೆ ಆಹಾರವಾದವು. ಆದ್ದರಿಂದ ಅವು ಚದರಿಹೋದವು.


ಆಗ ನಿನ್ನ ಎಲ್ಲಾ ತುಚ್ಛಮಾತುಗಳನ್ನು ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವೆ. “ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನ್ನೆಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನ್ನು ಲೂಟಿ ಮಾಡೋಣ’ ಎಂದು ನೀನು ಹೇಳಿದಿ.


ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನ್ನು’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


“ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು