Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:10 - ಪರಿಶುದ್ದ ಬೈಬಲ್‌

10 ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ. ಬನ್ನಿ, ಅದರ ಬಗ್ಗೆ ನಾವು ಚೀಯೋನಿನಲ್ಲಿ ಹೇಳೋಣ. ನಮ್ಮ ದೇವರಾದ ಯೆಹೋವನು ಮಾಡಿದ್ದನ್ನು ನಾವು ಹೇಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡಿಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:10
18 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


ನಿನ್ನ ನೀತಿಯೂ ನ್ಯಾಯವೂ ಮಧಾಹ್ನದ ಸೂರ್ಯನಂತೆ ಪ್ರಕಾಶಿಸಲಿ.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.


ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.


ದೇವಭಕ್ತರೆಲ್ಲರೂ ಬನ್ನಿರಿ, ದೇವರು ನನಗೋಸ್ಕರ ಮಾಡಿರುವುದನ್ನು ನಿಮಗೆ ತಿಳಿಸುವೆನು.


ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.


ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು