ಯೆರೆಮೀಯ 51:11 - ಪರಿಶುದ್ದ ಬೈಬಲ್11 ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಬಾಣಗಳನ್ನು ಮೆರುಗು ಮಾಡಿರಿ; ಡಾಲುಗಳನ್ನು ಎತ್ತಿಕೊಳ್ಳಿರಿ, ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, ಅವರ ದೇವಾಲಯದ ಪ್ರತಿದಂಡನೆಯಾಗಿದೆ. ಅಧ್ಯಾಯವನ್ನು ನೋಡಿ |
ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.