Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:3 - ಪರಿಶುದ್ದ ಬೈಬಲ್‌

3 ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು. ಅವರು ತಮ್ಮ ಕವಚಗಳನ್ನು ಧರಿಸಲಾರರು. ಬಾಬಿಲೋನಿನ ಯೋಧರಿಗೆ ಮರುಕ ತೋರಿಸಬೇಡಿ. ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಬಾಣಗಳನ್ನೆಸೆಯಲು ಅವಕಾಶವಿಲ್ಲದಿರಲಿ. ಬಾಬಿಲೋನಿಯದ ಯುವಕರನ್ನು ಉಳಿಸದಿರಿ. ಅದರ ಸೈನಿಕರನ್ನೆಲ್ಲ ನಿಶ್ಶೇಷಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅವರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಿಲ್ಲು ಬಗ್ಗಿಸುವವನಿಗೆ ವಿರೋಧವಾಗಿಯೂ, ಕವಚದಲ್ಲಿ ತನ್ನನ್ನು ಹೆಚ್ಚಿಸಿಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:3
12 ತಿಳಿವುಗಳ ಹೋಲಿಕೆ  

“ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.


ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.


ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು