Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:34 - ಪರಿಶುದ್ದ ಬೈಬಲ್‌

34 “ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 [ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:34
21 ತಿಳಿವುಗಳ ಹೋಲಿಕೆ  

“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.


ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.


ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ಈ ದೇಶದ ಬಡಜನರನ್ನು ನಾಶಮಾಡುತ್ತೀರಿ.


“ಆದ್ದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನ್ನ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.’”


ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


“ಬಾಬಿಲೋನ್ ಇಸ್ರೇಲರನ್ನು ಕೊಂದಿತು. ಬಾಬಿಲೋನ್ ಭೂಮಂಡಲದ ಎಲ್ಲೆಡೆಯ ಜನರನ್ನು ಕೊಂದಿತು. ಅದಕ್ಕಾಗಿ ಬಾಬಿಲೋನ್ ಪತನವಾಗಲೇಬೇಕು.


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು “ಬೆಂಗಾಡಿನ ಮರುಭೂಮಿ” ಎಂದು ಕರೆಯಲ್ಪಡುವದು.


ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.


ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ.


“ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.


ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು