Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:43 - ಪರಿಶುದ್ದ ಬೈಬಲ್‌

43 ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ, ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದುಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:43
12 ತಿಳಿವುಗಳ ಹೋಲಿಕೆ  

‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.


ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.


ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’


ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು