ಯೆರೆಮೀಯ 51:9 - ಪರಿಶುದ್ದ ಬೈಬಲ್9 ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬಾಬೆಲನ್ನು ಸ್ವಸ್ಥಮಾಡುವದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳವರೆಗೂ ಏರುತ್ತದೆ.’ ಅಧ್ಯಾಯವನ್ನು ನೋಡಿ |
ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.