Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:1 - ಪರಿಶುದ್ದ ಬೈಬಲ್‌

1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:1
12 ತಿಳಿವುಗಳ ಹೋಲಿಕೆ  

ಚಿದ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.


ಆಗ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಮಕ್ಕೇದದಿಂದ ಪ್ರಯಾಣ ಮಾಡಿ ಲಿಬ್ನಕ್ಕೆ ಹೋಗಿ ಆ ಪಟ್ಟಣದ ಮೇಲೆ ಧಾಳಿಮಾಡಿದರು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಕಾಲ ರಾಜ್ಯಭಾರ ಮಾಡಿದನು.


ಹೀಗೆ ಎದೋಮ್ಯರು ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿನ ತನಕ ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ. ಅದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಳ್ವಿಕೆಯಿಂದ ಬೇರೆಯಾದರು.


ಯೆಹೂದದ ಜನರು ಈ ಊರುಗಳನ್ನು ಸಹ ಪಡೆದುಕೊಂಡರು: ಲಿಬ್ನಾ, ಎತೆರ್, ಆಷಾನ್,


ಯೆಹೋವಾಹಾಜನು ರಾಜನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.


ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ,


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.


ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.


ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.


ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.


ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು