Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:11 - ಪರಿಶುದ್ದ ಬೈಬಲ್‌

11 ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು ಅವನಿಗೆ ಬೇಡಿ ಹಾಕಿ ಬಾಬೆಲಿಗೆ ತೆಗೆದುಕೊಂಡು ಹೋಗಿ ಅವನು ಜೀವದಿಂದಿರುವವರೆಗೆ ಸೆರೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:11
7 ತಿಳಿವುಗಳ ಹೋಲಿಕೆ  

ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.


ಅನಂತರ ನೆಬೂಕದ್ನೆಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.


ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು