Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:30 - ಪರಿಶುದ್ದ ಬೈಬಲ್‌

30 ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಳ್ವಿಕೆಯ ಇಪ್ಪತ್ತು ಮೂರನೆಯ ವರ್ಷದಲ್ಲಿ ರಕ್ಷಾದಳದ ನಾಯಕ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೆಬೂಕದ್ನೆಚ್ಚರನ ಆಳಿಕೆಯ ಇಪ್ಪತ್ತು ಮೂರನೆಯ ವರುಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:30
6 ತಿಳಿವುಗಳ ಹೋಲಿಕೆ  

ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”


ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


ನೆಬೂಕದ್ನೆಚ್ಚರನ ಹದಿನೆಂಟನೇ ವರ್ಷದಲ್ಲಿ ಜೆರುಸಲೇಮಿನಿಂದ 832.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು