ಯೆರೆಮೀಯ 52:6 - ಪರಿಶುದ್ದ ಬೈಬಲ್6 ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿವಸ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.