Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:8 - ಪರಿಶುದ್ದ ಬೈಬಲ್‌

8 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾಬಿಲೋನಿಯದ ಸೈನಿಕರು ಅರಸ ಚಿದ್ಕೀಯನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:8
13 ತಿಳಿವುಗಳ ಹೋಲಿಕೆ  

“ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.


ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.


ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಧಿಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು